
ಆಹಾರದ ಕಿಟ್ ವಿಳಂಬ: ಆದಿವಾಸಿಗಳ ಪ್ರತಿಭಟನೆ
ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ, ಸರಗೂರು, ನಂಜನಗೂಡು, ಹುಣಸೂರು ಮತ್ತು ಪಿರಿಯಾಪಟ್ಟಣ ತಾಲೂಕುಗಳ ಆದಿವಾಸಿ ಜನರಿಗೆ ಐಟಿಡಿಪಿ (ITDP) ಮೂಲಕ ವಿತರಿಸಲಾಗುವ ವಿಶೇಷ ಪೌಷ್ಟಿಕ ಆಹಾರ ಸಾಮಗ್ರಿಗಳ ಕಿಟ್ ವಿತರಣೆಯಲ್ಲಿ ಆಗುತ್ತಿರುವ ವಿಳಂಬವನ್ನು ಖಂಡಿಸಿ, ಅಖಿಲ ಭಾರತ ಜನ ಅಧಿಕಾರ ಸುರಕ್ಷಾ ಸಮಿತಿ (AIJASC) ನೇತೃತ್ವದಲ್ಲಿ ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಜೂನ್ 16ರಂದು ಬೃಹತ್ ಪ್ರತಿಭಟನೆ ನಡೆಸಲಾಯಿತು.






